July 23, 2026
ವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ಜೂ. 22) ಕಾನೂನು ಅರಿವು ಕಾರ್ಯಕ್ರಮ ಜರಗಿತು.

ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ. ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು. ವಿದ್ಯಾರ್ಥಿಗಳು ಮೂಲಭೂತ ಕಾನೂನುಗಳ ಅರಿವು ಹೊಂದುವುದು ಅಗತ್ಯ ಎಂದರು.

ಮುಖ್ಯ ಅತಿಥಿ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅವರು ಮಾತನಾಡಿ, ವಿದ್ಯಾರ್ಥಿಗಳು ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಸೂಕ್ತ ಪ್ರಾಮುಖ್ಯ ನೀಡಬೇಕು ಎಂದರು.

ವಕೀಲ ಚಿದಾನಂದ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಬಾಲ ಕಾರ್ಮಿಕ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು‌.

ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಅಧ್ಯಕ್ಷತೆ ವಹಿಸಿದ್ದರು‌. ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಆರಾಧ್ಯ ಸ್ವಾಗತಿಸಿ, ಪ್ರಶ್ಯ ವಂದಿಸಿದರು. ಶಿಕ್ಷಕ ಮುರಳಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!