24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya
error: Content is protected !!