25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
error: Content is protected !!