September 7, 2026
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya
error: Content is protected !!