July 23, 2026
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ.

ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ, ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕ ದಿನದಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಕ್ಷಿತ್ ಶಿವರಾಂರವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದರು.
ಕೂಡಲೇ ರಕ್ಷಿತ್ ಶಿವರಾಂ ಅವರು ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ಅವರ ಗಮನಕ್ಕೆ ತಂದಾಗ, ಇದಕ್ಕೆ ಸ್ಪಂದಿಸಿ, ತಮ್ಮ ವಿಧಾನ ಪರಿಷತ್ ನಿಧಿಯಿಂದ ಸುಮಾರು ರೂ. 2ಲಕ್ಷ ಅನುದಾನ ಮಂಜೂರುಗೊಳಿಸಿದ್ದು, ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಶಾಲೆಯ ಬೇಡಿಕೆ ಈಡೇರಿದೆ. ಶಾಲೆಯ ಬೇಡಿಕೆ ಈಡೇರಿಸಿದ ರಕ್ಷಿತ್ ಶಿವರಾಂ ಅವರಿಗೆ ಊರವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya
error: Content is protected !!