22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ
ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ, ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನವನ್ನು ಜೂನ್ 23 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕರು ವಿಧಾನ ಪರಿಷತ್ ಶಾಸಕರು ಆಗಿರುವ ಶ್ರೀ ಪ್ರತಾಪ್ ಸಿಂಹ ನಾಯಕ್ ಅವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಮೌಲ್ಯಗಳನ್ನು ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅವರು ಪಕ್ಷ ಕ್ಕೆ ಕೊಟ್ಟ ಕೊಡುಗೆಯನ್ನು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ದನ್ಯವಾದವಿತ್ತರು. ಈ ಸಂದರ್ಭದಲ್ಲಿ ಮoಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಆಶಾ ಸಲ್ದಾನ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಉಮೇಶ್ ಕುಲಾಲ್ ಉಪಸ್ಥಿತರಿದ್ದರು.


ನಗರದ 105 ಬೂತ್ ಅಧ್ಯಕ್ಷರಾದ ಅಕ್ಷಯ್ ರಾವ್ ರವರ ಮನೆಯಲ್ಲಿ ಸಸಿ ನೆಡಲಾಯಿತು.

Related posts

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!