23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಎರಡು ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡುತ್ತಾ ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಬಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು. ಇದರಿಂದ ಸ್ವಂತ ಉದ್ಯೋಗ ಪ್ರಾರಂಭಿಸಲು ಅನುಕೂಲವಾಗುತ್ತದೆ, ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ಹೇಳಿದರು. ತರಬೇತಿ ಪಡೆದ ಎಲ್ಲರಿಗೂ ಶುಭ ಹಾರೈಸಿ ಆರ್ಶೀವದಿಸಿದರು.

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಾಹಾ ಪ್ರಬಂಧಕ ರಂಜನ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ. ಎನ್. ಜರ್ನಾಧನ್, ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ ಬಿ.ಪಿ ಉಪಸ್ಥಿತರಿದ್ದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ರವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಅವರು ವಂದಿಸಿದರು. ತರಬೇತಿಯಲ್ಲಿ ಒಟ್ಟು 65 ಜನ ಅಭ್ಯರ್ಥಿಗಳನ್ನು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya
error: Content is protected !!