25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ಆಯೋಜಿಸಿಕೊಂಡಿರುತ್ತೇವೆ. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಯಾಗಿ ಜೇಸಿ ವಿದ್ಯೆಂದ್ರ ಗೌಡ ಅವರು ಸಂಪೂರ್ಣ ಮಾಹಿತಿಯನ್ನು ನೀಡಿರುತ್ತಾರೆ.


ಹವಾಮಾನವನ್ನು ಹೊಂದಿಕೊಂಡು ಬೆಳೆಯವ ಸಾಮರ್ಥ್ಯವಿದೆ. ಅಣಬೆ ಕೃಷಿ ಮಾಡಲು ವಿವಿಧ ಹಂತಗಳಿವೆ. ಮೊದಲು ಭತ್ತದ ಹುಲ್ಲನ್ನು 4ರಿಂದ 5 ಸೆಂ.ಮೀ. ಉದ್ದದ ತಂಡುಗಳಾಗಿ ಕತ್ತರಿಸಿ ಸುಮಾರು 3ರಿಂದ4 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ಹುಲ್ಲಿನಲ್ಲಿರುವ ನೀರನ್ನೆಲ್ಲಾ ಬಸಿದು ಕುದಿಯುವ ನೀರಿನಲ್ಲಿ 2 ಗಂಟೆಗಳ ಕಾಲ ನೆನೆಸಬೇಕು. ಕುದಿಯುವ ನೀರಿನಿಂದ ಹುಲ್ಲನ್ನು ತೆಗೆದು ಅದನ್ನು ಒಣಗಿಸಿ ಹೆಚ್ಚಿನ ನೀರಿನ ಅಂಶವನ್ನು ತೆಗೆಯಬೇಕು. ಒಣಗಿದ ಹುಲ್ಲನ್ನು ಪಾಲಿಥೀನ್ ಚೀಲಗಳಿಗೆ ತುಂಬಬೇಕು, ಒಂದು ಚೀಲಕ್ಕೆ ಒಂದು ಕೆ.ಜಿ.ಯಷ್ಟು ಹುಲ್ಲು ಹಾಗೂ 500 ಗ್ರಾಮ್ ಅಣಬೆ ಬೀಜವನ್ನು ಹಂತ ಹಂತವಾಗಿ ಸಮಾನಾಗಿ ಹರಡಿ ತುಂಬಬೇಕು. ಚೀಲದ ಬಾಯನ್ನು ಭದ್ರವಾಗಿ ಕಟ್ಟಬೇಕು. ನಂತರ ಚೀಲಗಳನ್ನು ತಂಪಾಗಿರುವ ಸ್ಥಳದಲ್ಲಿ 20ರಿಂದ 30 ದಿನಗಳ ಕಾಲ ಇಡಬೇಕು. ಆಗ ಅಣಬೆ ಬೀಜ ಮೊಳಕೆಯೊಡೆದು ಬೆಳೆದಿರುತ್ತದೆ. ಚೀಲಗಳಿಗೆ ಬ್ಲೇಡ್‌ನಿಂದ ರಂಧ್ರಗಳನ್ನು ಮಾಡಬೇಕು. ದಿನಕ್ಕೆ 2ರಿಂದ 3ಬಾರಿ ನೀರು ಚಿಮುಕಿಸುತ್ತಿರಬೇಕು. ಚೀಲಕ್ಕೆ ರಂಧ್ರಗಳನ್ನು ಮಾಡಿದ ಒಂದು ವಾರದ ಒಳಗೆ ಹುಲ್ಲಿನ ಪಿಂಡಿಯ ಸುತ್ತಲೂ ಅಣಬೆ ಕಾಣಸಿಗುತ್ತದೆ. ಪ್ರತಿ 3 ದಿನಕ್ಕೊಮ್ಮೆ ಅಣಬೆ ಕೊಯಿಲು ಮಾಡಬಹುದು ಎಂದು ತಿಳಿಸಿದರು.

ಕಾರ್ಯಗಾರರ ದಲ್ಲಿ ಜೆ ಸಿ ಐ ಘಟಕದ ಅಧ್ಯಕ್ಷರಾಗಿರುವ ಜೇಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೇಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷ ಜೇಸಿ ಶೋಭಾ, ಪೂರ್ವ ಅಧ್ಯಕ್ಷರಾದ ಜೇಸಿ ಜೆಎಫ್ಎಂ ಕೆ ಶ್ರೀಧರ್ ರಾವ್, ಅರಣ್ಯ ಸಮಿತಿ ಅಧ್ಯಕ್ಷರಾದ ಧನಂಜಯ ಗೌಡ ಮತ್ತು ಶಿವಪ್ರಸಾದ್ ಹಾಗೂ ಇತರರು ಕಾರ್ಯಗಾರದಲ್ಲಿ ಭಾಗವಹಿಸಿದರು.

Related posts

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya
error: Content is protected !!