September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್‌ ಸೈಕಲ್‌ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ.

ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22 ರಂದು ಬೆಳಿಗ್ಗೆ, ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ, ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA70J4070 ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ, ರಾಜೇಶ್ ರವರ ಬಾಬ್ತು ಮೋಟಾರ್‌ ಸೈಕಲ್‌, ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಮೋಟಾರ್‌ ಸೈಕಲ್‌ ನ್ನು ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 49/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya
error: Content is protected !!