ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಬೂತ್ 218 ರ ಅಧ್ಯಕ್ಷರಾದ ಜನಾರ್ಧನ ಗೌಡ ಪುಯಿಲ ಅವರ ನೇತೃತ್ವದಲ್ಲಿ ಜೂನ್ 23 ರಂದು ಮೈರೋಳ್ತಡ್ಕ ಜಯ ಮೋಹನ್ ಬಂಗೇರರವರ ನಿವಾಸದಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು. ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತ್ ನ ಪ್ರಮುಖರು ಉಪಸ್ಥಿತರಿದ್ದರು.

Leave a Comment

error: Content is protected !!