September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಸುವರ್ಣ ಸಂಭ್ರಮವು ಉಜಿರೆ ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 23 ರಂದು ನಡೆಯಿತು.
ಸುವರ್ಣ ಸಂಭ್ರಮಸ್ತವವನ್ನು ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ, ವಿಶ್ವನಾಥ್ ಆರ್ ನಾಯಕ್, ಉದ್ಯಮಿ ಸದಾಶಿವ ಶೆಟ್ಟಿ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಪ್ರಥಮ ಮಹಿಳೆ ಸವಿತಾ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ, ಲಯನ್ಸ್ ಪಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಲ್ಟ್ ಲಯನ್ಸ್ ಜಿಲ್ಲಾ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ, ನಿಕಟ ಪೂರ್ವ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ,. ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಿಯೊ ಕ್ಲಬ್ ಅಧ್ಯಕ್ಷೆ ಅಪ್ಸರ ಉಪಸ್ಥಿತರಿದರು.

ಸಂಜೆ ಎಸ್.ಡಿ.ಎಮ್ ಕಾಲೇಜಿನಿಂದ ಉಜಿರೆ ಕೃಷ್ಣ ಅನುಗ್ರಹ ಸಭಾಂಗಣ ತನಕ ಚೆಂಡೆ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ನಂತರ ಚಿನ್ನರ ಚಿಲಿಪಿಲಿ, ಹಾಡಿನ ಝೇಂಕಾರ, 45 ಪೂರ್ವ ಅಧ್ಯಕ್ಷರಿಗೆ ಸನ್ಮಾನ, 5 ಸಾಧಕರಾದ ಲಕ್ಷ್ಮಿ ಗ್ರೂಪ್ ಮೋಹನ್ ಕುಮಾರ್, ಗೋಪಾಲ ಪಣಿಕ್ಕರ್., ಗೋಪಾಲಕೃಷ್ಣ ಕಾಂಚೋಡು, ಬಿ ಎಲ್ ಗಣೇಶ್, ರಾಮಚಂದ್ರ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆಯ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ
ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೋ, ಲಯನ್ಸ್ ಜಿಲ್ಲೆಯ ಸಂಪುಟ ಕಾರ್ಯದರ್ಶಿ ಓಸ್ವಲ್ಟ್, ಲಯನ್ಸ್ ಜಿಲ್ಲೆಯ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ ಇವರಿಗೆ ಸನ್ಮಾನಿಸಲಾಯಿತು.


ಸಂಜೆ ಪುದರ್ ದಿ ದಾಂಡ ತುಳು ಹಾಸ್ಯಮಯ ನಾಟಕ ನಡೆಯಿತು.

Related posts

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಉಜಿರೆ : ‘ಲಿಂಗಸೂಕ್ಷ್ಮತೆ ಅರಿವು ‘ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!