July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಸುವರ್ಣ ಸಂಭ್ರಮವು ಉಜಿರೆ ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 23 ರಂದು ನಡೆಯಿತು.
ಸುವರ್ಣ ಸಂಭ್ರಮಸ್ತವವನ್ನು ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ, ವಿಶ್ವನಾಥ್ ಆರ್ ನಾಯಕ್, ಉದ್ಯಮಿ ಸದಾಶಿವ ಶೆಟ್ಟಿ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಪ್ರಥಮ ಮಹಿಳೆ ಸವಿತಾ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ, ಲಯನ್ಸ್ ಪಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಲ್ಟ್ ಲಯನ್ಸ್ ಜಿಲ್ಲಾ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ, ನಿಕಟ ಪೂರ್ವ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ,. ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಿಯೊ ಕ್ಲಬ್ ಅಧ್ಯಕ್ಷೆ ಅಪ್ಸರ ಉಪಸ್ಥಿತರಿದರು.

ಸಂಜೆ ಎಸ್.ಡಿ.ಎಮ್ ಕಾಲೇಜಿನಿಂದ ಉಜಿರೆ ಕೃಷ್ಣ ಅನುಗ್ರಹ ಸಭಾಂಗಣ ತನಕ ಚೆಂಡೆ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ನಂತರ ಚಿನ್ನರ ಚಿಲಿಪಿಲಿ, ಹಾಡಿನ ಝೇಂಕಾರ, 45 ಪೂರ್ವ ಅಧ್ಯಕ್ಷರಿಗೆ ಸನ್ಮಾನ, 5 ಸಾಧಕರಾದ ಲಕ್ಷ್ಮಿ ಗ್ರೂಪ್ ಮೋಹನ್ ಕುಮಾರ್, ಗೋಪಾಲ ಪಣಿಕ್ಕರ್., ಗೋಪಾಲಕೃಷ್ಣ ಕಾಂಚೋಡು, ಬಿ ಎಲ್ ಗಣೇಶ್, ರಾಮಚಂದ್ರ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆಯ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ
ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೋ, ಲಯನ್ಸ್ ಜಿಲ್ಲೆಯ ಸಂಪುಟ ಕಾರ್ಯದರ್ಶಿ ಓಸ್ವಲ್ಟ್, ಲಯನ್ಸ್ ಜಿಲ್ಲೆಯ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ ಇವರಿಗೆ ಸನ್ಮಾನಿಸಲಾಯಿತು.


ಸಂಜೆ ಪುದರ್ ದಿ ದಾಂಡ ತುಳು ಹಾಸ್ಯಮಯ ನಾಟಕ ನಡೆಯಿತು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya
error: Content is protected !!