ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೆಎಂಎಫ್ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗನ್ನಾಥ ಶೆಟ್ಟಿ ಮೈರ ಅವರನ್ನು ಅಭಿನಂದಿಸಲಾಯಿತು.


ಸಹಕಾರ ಭಾರತಿ‌ ಬೆಳ್ತಂಗಡಿ ಅಧ್ಯಕ್ಷ ವೆಂಕಪ್ಪಯ್ಯ ಸ್ವಾಗತಿಸಿದರು. ನಿಕಟಪೂರ್ವಾಧ್ಯಕ್ಷ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya
error: Content is protected !!