September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಮಡಂತ್ಯಾರು : ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡವು 4 ವರ್ಷಗಳನ್ನು ಪೂರೈಸಿ 5 ನೇ ವರ್ಷ ಕ್ಕೆ ಪಾದಾರ್ಪಣೆ ಗೈಯುವ ಸವಿನೆನಪಿಗಾಗಿ ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ಪೇಜಾವರ ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೂಪಾ ರವರು ಗಿಡ ನಾಟಿ ಮಾಡುವ ಮೂಲಕ ಶುಭಹಾರೈಸಿದರು.

ಮಡಂತ್ಯಾರು ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಅರ್ಚಕರಾದ ಆದಿತ್ಯ, ಪಾರೆಂಕಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ದೀಪಕ್ ಹಾರಬೆ, ಸುಜೀತ್ ಕುಮಾರ್, ಜಯ ಪೂಜಾರಿ ಕುತ್ತಿನ, ಪುರುಷೋತ್ತಮ, ಮಾಧವ, ಶ್ರೀಮತಿ ಶೋಭಾ, ಶ್ರೀಮತಿ ಶಕುಂತಳಾ, ಬೇಬಿ, ಸತೀಶ್ ಆಚಾರ್ಯ ಗಿಡ ನಾಟಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!