September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ, ‘ನಾಯಕರಾಗಲು ಪ್ರಮುಖವಾಗಿ ಧೈರ್ಯ ಬಹಳ ಅಗತ್ಯ. ವಿದ್ಯಾರ್ಥಿಗಳು ತಾವು ಕಲಿತ ವಿದ್ಯಾ ಸಂಸ್ಥೆಯನ್ನು ಎಂದಿಗೂ ಮರೆಯಬಾರದು’ ಎಂಬುದಾಗಿ ಕಿವಿ ಮಾತನ್ನು ನುಡಿದರು. ವಿದ್ಯಾರ್ಥಿ ನಾಯಕರುಗಳಿಗೆ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ ಸೋಜ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ , ಸ್ವಾಗತಿಸಿದರು. ವೇದಿಕೆಯಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದು, ಅಧ್ಯಕ್ಷ ಧನುಷ್ ಇವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ಗೀತಾ ಇವರು ಪುಷ್ಪ ಗುಚ್ಛ ಸಮರ್ಪಿಸಿದರು. ಉಪನ್ಯಾಸಕಿ ವಸಂತಿ ಇವರು ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ಇವರು ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ನೇತ್ರಾವತಿ ಪೀಕ್‌ಗೆ ಚಾರಣಿಗರ ಆಗಮನ ಶುರು: ಟ್ರೆಕ್ಕಿಂಗಳ ಸುರಕ್ಷತೆಗಾಗಿ ಅಲ್ಲಲ್ಲಿ ಸೂಚನ ಪಲಕ, ೧೧೫ ಟ್ರೆಕ್ ಗೈಡ್‌ಗಳ ನೇಮಕ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya
error: Content is protected !!