July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ, ‘ನಾಯಕರಾಗಲು ಪ್ರಮುಖವಾಗಿ ಧೈರ್ಯ ಬಹಳ ಅಗತ್ಯ. ವಿದ್ಯಾರ್ಥಿಗಳು ತಾವು ಕಲಿತ ವಿದ್ಯಾ ಸಂಸ್ಥೆಯನ್ನು ಎಂದಿಗೂ ಮರೆಯಬಾರದು’ ಎಂಬುದಾಗಿ ಕಿವಿ ಮಾತನ್ನು ನುಡಿದರು. ವಿದ್ಯಾರ್ಥಿ ನಾಯಕರುಗಳಿಗೆ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ ಸೋಜ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ , ಸ್ವಾಗತಿಸಿದರು. ವೇದಿಕೆಯಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದು, ಅಧ್ಯಕ್ಷ ಧನುಷ್ ಇವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ಗೀತಾ ಇವರು ಪುಷ್ಪ ಗುಚ್ಛ ಸಮರ್ಪಿಸಿದರು. ಉಪನ್ಯಾಸಕಿ ವಸಂತಿ ಇವರು ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ಇವರು ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya
error: Content is protected !!