ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಪಾಂಡುರಂಗ ಮಾಸ್ಟರ್, ಜನಾರ್ದನ ಶೆಟ್ಟಿಗಾರ್, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಬೂತ್ ಸಮಿತಿ ಕಾರ್ಯದರ್ಶಿ ರಾಜೇಶ್ ಪೂಜಾರಿ ಪಲ್ಕೆಬೆಟ್ಟು, ಆರಂಬೋಡಿ ಹಾಲು.ಉ.ಸ.ಸ ನಿರ್ದೇಶಕರಾದ ಉಮೇಶ್ ಶೆಟ್ಟಿ ಪಾಲ್ಯ ಉಪಸ್ಥಿತರಿದ್ದರು.

Leave a Comment

error: Content is protected !!