22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶಾರದಾಂಬ ಸಭಾಭವನದಲ್ಲಿ ಸಮೃದ್ಧಿ ಜ್ಞಾನವಿಕಾಸ ಕೇಂದ್ರವನ್ನು ದೀಪ ಬೆಳಗಿಸುವುದರ ಮೂಲಕ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಉದ್ಘಾಟನೆ ಮಾಡಿ ಜ್ಞಾನವಿಕಾಸ ಕೇಂದ್ರದ ಹುಟ್ಟು ಮತ್ತು ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಷಾ ರವರು ಮಹಿಳೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಜ್ಞಾನವಿಕಾಸದ ಪಾತ್ರ ಏನು ಎಂಬುದರ ಬಗ್ಗೆ ತಿಳಿಸಿದರು. ಜ್ಞಾನ ಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರಾದ ಲೀಲಾವತಿ ಅವರು ಮಾತನಾಡುತ್ತಾ ನಾನು ಒಬ್ಬ ಜ್ಞಾನ ವಿಕಾಸದ ಸದಸ್ಯೆಯಾಗಿ ಬಹಳಷ್ಟು ಮಾಹಿತಿಯನ್ನು ಪಡೆದುಕೊಂಡು ಅಭಿವೃದ್ಧಿಯನ್ನು ಹೊಂದಿರುವುದರ ಬಗ್ಗೆ ತಿಳಿಸಿದರು. ಒಕ್ಕೂಟದ ಅಧ್ಯಕ್ಷೆ ಶೀಲಾವತಿ ಎಲ್ಲಾ ಕಾರ್ಯಕ್ರಮಗಳು ಉಜಿರೆಯಲ್ಲಿ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು ಈ ದಿನ ಉದ್ಘಾಟನೆಯಾದ ಕೇಂದ್ರ ಉತ್ತಮ ರೀತಿಯಲ್ಲಿ ನಾವೆಲ್ಲರೂ ಸೇರಿ ನಡೆಸಿಕೊಂಡು ಹೋಗೊಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೇಂದ್ರದ ಸಂಯೋಜಕಿಯಾದ ಸೌಮ್ಯರವರಿಗೆ ಕೇಂದ್ರದ ದಾಖಲಾತಿಯನ್ನು ಹಸ್ತಾಂತರ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ವನಿತಾ ಸ್ವಾಗತಿಸಿ. ಸೇವಾ ಪ್ರತಿನಿಧಿ ಪ್ರೇಮಲತಾ ಧನ್ಯವಾದವಿತ್ತರು. ಸಮನ್ವಯಧಿಕಾರಿ ಮಧುರಾವಸಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya
error: Content is protected !!