25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವೂ ಬೆಳ್ತಂಗಡಿ ತಾಲೂಕು ಮೈದಾನ ಮತ್ತು ಬಂಗೇರಕಟ್ಟೆ ಕಲ್ಲಗುಡ್ಡೆ ಮೈದಾನದಲ್ಲಿ ನಡೆಯಿತು.

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಮುಖ್ಯ ಅತಿಥಿಯಾಗಿ ಆಗಮಿಸಿ ಸಂಸ್ಥಾಪನಾ ದಿನಾಚರಣೆಯ ಶುಭಾಶಯ ಕೋರಿದರು. ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮದ ಅಗತ್ಯತೆಯನ್ನು ಮನವರಿಕೆ ಮಾಡಿದರು. ಗ್ರಾಮೀಣ ಭಾಗದ ಎಲ್ಲಾ ಯುವಕರು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವಂತೆ ಕರೆ ನೀಡಿದರು. ವಿಜೇತರಿಗೆ ಬಹುಮಾನ ವಿತರಿಸಿದರು‌.

ಕ್ರೀಡಾಕೂಟದಲ್ಲಿ ಕ್ರಿಕೆಟ್, ಥ್ರೋ ಬಾಲ್, ಲಿಂಬೆ ಚಮಚ ಓಟ, ವಿಕೆಟ್ ಸುತ್ತು ಓಟ ಹಾಗೂ ಇನ್ನಿತರ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಝೀರ್ ಬಂಗೇರಕಟ್ಟೆ ಮತ್ತು ರಿಯಾಝ್ ಬೆಳ್ತಂಗಡಿ ಕ್ರೀಡಾಕೂಟವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷರಾದ ಇಸ್ಮಾಲಿ ಐ ಬಿ, ಹನೀಫ್ ವರ್ಷಾ, ಹನೀಫ್ ಟಿ ಎಸ್, ಖಾಸಿಂ ಬಳ್ಳಮಂಜ, ರಝಕ್ ಬಿ ಎಂ, ಆಸೀಫ್ ಬಂಗೇರಕಟ್ಟೆ, ಹನೀಫ್, ಉಮರಬ್ಬ, ಇಕ್ಬಾಲ್, ಇಮ್ರಾನ್, ರಶೀದ್ ಬೆಳ್ತಂಗಡಿ, ಅಬೂಸಾಲಿ ಬೆಳ್ತಂಗಡಿ, ಬೆಳ್ತಂಗಡಿ ನಗರ ಸಮಿತಿ, ಮಚ್ಚಿನ ಪಾರೆಂಕಿ ಗ್ರಾಮ ಸಮಿತಿಯ ಪಧಾದಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya
error: Content is protected !!