July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್‌ ಸೈಕಲ್‌ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ.

ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22 ರಂದು ಬೆಳಿಗ್ಗೆ, ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ, ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA70J4070 ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ, ರಾಜೇಶ್ ರವರ ಬಾಬ್ತು ಮೋಟಾರ್‌ ಸೈಕಲ್‌, ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಮೋಟಾರ್‌ ಸೈಕಲ್‌ ನ್ನು ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 49/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya
error: Content is protected !!