September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್‌ ಸೈಕಲ್‌ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ.

ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22 ರಂದು ಬೆಳಿಗ್ಗೆ, ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ, ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA70J4070 ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ, ರಾಜೇಶ್ ರವರ ಬಾಬ್ತು ಮೋಟಾರ್‌ ಸೈಕಲ್‌, ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಮೋಟಾರ್‌ ಸೈಕಲ್‌ ನ್ನು ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 49/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!