24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ನಾರಾವಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ನಾರಾವಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಗಿಡ ನೆಡುವ ಕಾರ್ಯಕ್ರಮವನ್ನು ನಾರಾವಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ ಹಾಗೂ ಕೃಷಿ ಅಧಿಕಾರಿ ಕೃಷ್ಣ ನೆರವೇರಿಸಿದರು.

ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅಧ್ಯಕ್ಷ ಸದಾನಂದ ಬಂಗೇರ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಪ್ರಾಸ್ತಾವಿಕವಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಭಾಕರ ಪೂಜ್ಯ ಖಾವಂದರ ಬಗ್ಗೆ ಹಾಗೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳು ಒಳ್ಳೆಯ ರೀತಿಯಲ್ಲಿ ನಡೆಯುತ್ತಾ ಬಂದಿರುವ ಬಗ್ಗೆ ತಿಳಿಸಿ ನಮ್ಮ ಶಾಲೆಯಲ್ಲಿ ಕೂಡ ಈ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ತಾಲೂಕು ಕೃಷಿ ಅಧಿಕಾರಿ ಕೃಷ್ಣ ರಾಜ್ಯಾದ್ಯಂತ ಎಲ್ಲಾ ಕಡೆಗಳಲ್ಲಿ ಪರಿಸರ ಕಾರ್ಯಕ್ರಮ ಯೋಜನೆ ಹಾಗೂ ಶಾಲೆಯ ವತಿಯಿಂದ ಮಾಡಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು. ಮಕ್ಕಳಿಗೆ ಪರಿಸರ ಸಂರಕ್ಷಣೆ ಯಾವ ರೀತಿಯಲ್ಲಿ ಮಾಡಬೇಕು ಎಂದು ತಿಳಿಸಿದರು. ಅಂತರ್ಜಲ ಮಟ್ಟ ನೀರಾವರಿ ಕಾರ್ಯಕ್ರಮ ನಡೆಸುವ ಬಗ್ಗೆ ತಿಳಿಸಿ ಎಲ್ಲರಿಗೂ ಶುಭ ಹಾರೈಸಿದರು. ನಂತರ ಗ್ರಾಮ ಪಂಚಾಯತ್

ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ ನಾನು ಬಾಲ್ಯದಿಂದಲೇ ಯೋಜನೆಯ ಎಲ್ಲಾ ಕಾರ್ಯಕ್ರಮಗಳನ್ನು ನೋಡಿಕೊಂಡು ಬಂದಿದ್ದೇನೆ. ಹಾಗೂ ಪ್ರತಿ ವರ್ಷ ಹಲವು ಕಾರ್ಯಕ್ರಮಗಳು ಯೋಜನೆಯಿಂದ ಮಾಡುತ್ತಾ ಬಂದಿರುವ ಬಗ್ಗೆ ತಿಳಿಸಿದರು. ಯೋಜನೆಯ ವತಿಯಿಂದ ದೊರೆತಿರುವ ಅನುದಾನಗಳ ಬಗ್ಗೆ ತಿಳಿಸಿದರು. ಎಲ್ಲರಿಗೂ ಶುಭ ಹಾರೈಸಿದರು. ಮಕ್ಕಳಿಗೆ ವಿವಿಧ ಪರಿಸರದ ಬಗ್ಗೆ ಕಾರ್ಯಕ್ರಮ ನಡೆಸಿ ಬಹುಮಾನ ವಿತರಣೆ ಮಾಡಲಾಯಿತು. ನಂತರ ಅಧ್ಯಕ್ಷ ಸದಾನಂದ ಬಂಗೇರ ಇವರು ಮಕ್ಕಳಿಗೆ ಹುಟ್ಟುಹಬ್ಬ ಆಚರಣೆ ಗಿಡ ನೆಡುವ ಮೂಲಕ ಮಾಡುವಂತೆ ತಿಳಿಸಿದರು.

ಪರಿಸರ ಜಾಗೃತಿ ಕಾರ್ಯಕ್ರಮಕೆ ಸಹಕರಿಸಿದ ಶಾಲಾ ಸಮಿತಿಯವರಿಗೆ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ಸದಸ್ಯ ಅನಂದ ಶೆಟ್ಟಿ, ವಲಯದ ಮೇಲ್ವಿಚಾರಕಿ ದಮಯಂತಿ, ಶಾಲಾ ಶಿಕ್ಷಕರು, ಪೋಷಕರು ,ಸೇವಾಪ್ರತಿನಿಧಿಗಳು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶಿಲ್ಪಾ ನಿರೂಪಿಸಿ. ಕಾರ್ಯಕ್ರಮದ ಸೇವಾ ಪ್ರತಿನಿಧಿ ಹರಿಣಾಕ್ಷಿ ಧನ್ಯವಾದವಿತ್ತರು.

Related posts

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya
error: Content is protected !!