24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಸುವರ್ಣ ಸಂಭ್ರಮವು ಉಜಿರೆ ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 23 ರಂದು ನಡೆಯಿತು.
ಸುವರ್ಣ ಸಂಭ್ರಮಸ್ತವವನ್ನು ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ, ವಿಶ್ವನಾಥ್ ಆರ್ ನಾಯಕ್, ಉದ್ಯಮಿ ಸದಾಶಿವ ಶೆಟ್ಟಿ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಪ್ರಥಮ ಮಹಿಳೆ ಸವಿತಾ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ, ಲಯನ್ಸ್ ಪಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಲ್ಟ್ ಲಯನ್ಸ್ ಜಿಲ್ಲಾ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ, ನಿಕಟ ಪೂರ್ವ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ,. ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಿಯೊ ಕ್ಲಬ್ ಅಧ್ಯಕ್ಷೆ ಅಪ್ಸರ ಉಪಸ್ಥಿತರಿದರು.

ಸಂಜೆ ಎಸ್.ಡಿ.ಎಮ್ ಕಾಲೇಜಿನಿಂದ ಉಜಿರೆ ಕೃಷ್ಣ ಅನುಗ್ರಹ ಸಭಾಂಗಣ ತನಕ ಚೆಂಡೆ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ನಂತರ ಚಿನ್ನರ ಚಿಲಿಪಿಲಿ, ಹಾಡಿನ ಝೇಂಕಾರ, 45 ಪೂರ್ವ ಅಧ್ಯಕ್ಷರಿಗೆ ಸನ್ಮಾನ, 5 ಸಾಧಕರಾದ ಲಕ್ಷ್ಮಿ ಗ್ರೂಪ್ ಮೋಹನ್ ಕುಮಾರ್, ಗೋಪಾಲ ಪಣಿಕ್ಕರ್., ಗೋಪಾಲಕೃಷ್ಣ ಕಾಂಚೋಡು, ಬಿ ಎಲ್ ಗಣೇಶ್, ರಾಮಚಂದ್ರ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆಯ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ
ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೋ, ಲಯನ್ಸ್ ಜಿಲ್ಲೆಯ ಸಂಪುಟ ಕಾರ್ಯದರ್ಶಿ ಓಸ್ವಲ್ಟ್, ಲಯನ್ಸ್ ಜಿಲ್ಲೆಯ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ ಇವರಿಗೆ ಸನ್ಮಾನಿಸಲಾಯಿತು.


ಸಂಜೆ ಪುದರ್ ದಿ ದಾಂಡ ತುಳು ಹಾಸ್ಯಮಯ ನಾಟಕ ನಡೆಯಿತು.

Related posts

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya
error: Content is protected !!