25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಸುವರ್ಣ ಸಂಭ್ರಮವು ಉಜಿರೆ ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 23 ರಂದು ನಡೆಯಿತು.
ಸುವರ್ಣ ಸಂಭ್ರಮಸ್ತವವನ್ನು ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ, ವಿಶ್ವನಾಥ್ ಆರ್ ನಾಯಕ್, ಉದ್ಯಮಿ ಸದಾಶಿವ ಶೆಟ್ಟಿ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಪ್ರಥಮ ಮಹಿಳೆ ಸವಿತಾ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ, ಲಯನ್ಸ್ ಪಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಲ್ಟ್ ಲಯನ್ಸ್ ಜಿಲ್ಲಾ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ, ನಿಕಟ ಪೂರ್ವ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ,. ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಿಯೊ ಕ್ಲಬ್ ಅಧ್ಯಕ್ಷೆ ಅಪ್ಸರ ಉಪಸ್ಥಿತರಿದರು.

ಸಂಜೆ ಎಸ್.ಡಿ.ಎಮ್ ಕಾಲೇಜಿನಿಂದ ಉಜಿರೆ ಕೃಷ್ಣ ಅನುಗ್ರಹ ಸಭಾಂಗಣ ತನಕ ಚೆಂಡೆ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ನಂತರ ಚಿನ್ನರ ಚಿಲಿಪಿಲಿ, ಹಾಡಿನ ಝೇಂಕಾರ, 45 ಪೂರ್ವ ಅಧ್ಯಕ್ಷರಿಗೆ ಸನ್ಮಾನ, 5 ಸಾಧಕರಾದ ಲಕ್ಷ್ಮಿ ಗ್ರೂಪ್ ಮೋಹನ್ ಕುಮಾರ್, ಗೋಪಾಲ ಪಣಿಕ್ಕರ್., ಗೋಪಾಲಕೃಷ್ಣ ಕಾಂಚೋಡು, ಬಿ ಎಲ್ ಗಣೇಶ್, ರಾಮಚಂದ್ರ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆಯ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ
ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೋ, ಲಯನ್ಸ್ ಜಿಲ್ಲೆಯ ಸಂಪುಟ ಕಾರ್ಯದರ್ಶಿ ಓಸ್ವಲ್ಟ್, ಲಯನ್ಸ್ ಜಿಲ್ಲೆಯ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ ಇವರಿಗೆ ಸನ್ಮಾನಿಸಲಾಯಿತು.


ಸಂಜೆ ಪುದರ್ ದಿ ದಾಂಡ ತುಳು ಹಾಸ್ಯಮಯ ನಾಟಕ ನಡೆಯಿತು.

Related posts

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
error: Content is protected !!