22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಸುವರ್ಣ ಸಂಭ್ರಮವು ಉಜಿರೆ ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 23 ರಂದು ನಡೆಯಿತು.
ಸುವರ್ಣ ಸಂಭ್ರಮಸ್ತವವನ್ನು ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ, ವಿಶ್ವನಾಥ್ ಆರ್ ನಾಯಕ್, ಉದ್ಯಮಿ ಸದಾಶಿವ ಶೆಟ್ಟಿ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಪ್ರಥಮ ಮಹಿಳೆ ಸವಿತಾ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ, ಲಯನ್ಸ್ ಪಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಲ್ಟ್ ಲಯನ್ಸ್ ಜಿಲ್ಲಾ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ, ನಿಕಟ ಪೂರ್ವ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ,. ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಿಯೊ ಕ್ಲಬ್ ಅಧ್ಯಕ್ಷೆ ಅಪ್ಸರ ಉಪಸ್ಥಿತರಿದರು.

ಸಂಜೆ ಎಸ್.ಡಿ.ಎಮ್ ಕಾಲೇಜಿನಿಂದ ಉಜಿರೆ ಕೃಷ್ಣ ಅನುಗ್ರಹ ಸಭಾಂಗಣ ತನಕ ಚೆಂಡೆ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ನಂತರ ಚಿನ್ನರ ಚಿಲಿಪಿಲಿ, ಹಾಡಿನ ಝೇಂಕಾರ, 45 ಪೂರ್ವ ಅಧ್ಯಕ್ಷರಿಗೆ ಸನ್ಮಾನ, 5 ಸಾಧಕರಾದ ಲಕ್ಷ್ಮಿ ಗ್ರೂಪ್ ಮೋಹನ್ ಕುಮಾರ್, ಗೋಪಾಲ ಪಣಿಕ್ಕರ್., ಗೋಪಾಲಕೃಷ್ಣ ಕಾಂಚೋಡು, ಬಿ ಎಲ್ ಗಣೇಶ್, ರಾಮಚಂದ್ರ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಲಯನ್ಸ್ ಜಿಲ್ಲೆಯ ರಾಜ್ಯಪಾಲರಾದ ಮೇಲ್ವಿನ್ ಡಿಸೋಜ
ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೋ, ಲಯನ್ಸ್ ಜಿಲ್ಲೆಯ ಸಂಪುಟ ಕಾರ್ಯದರ್ಶಿ ಓಸ್ವಲ್ಟ್, ಲಯನ್ಸ್ ಜಿಲ್ಲೆಯ ಸಂಪುಟ ಕೋಶಾಧಿಕಾರಿ ಸುಧಾಕರ ಭಂಡಾರಿ ಇವರಿಗೆ ಸನ್ಮಾನಿಸಲಾಯಿತು.


ಸಂಜೆ ಪುದರ್ ದಿ ದಾಂಡ ತುಳು ಹಾಸ್ಯಮಯ ನಾಟಕ ನಡೆಯಿತು.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!