25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೆಎಂಎಫ್ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗನ್ನಾಥ ಶೆಟ್ಟಿ ಮೈರ ಅವರನ್ನು ಅಭಿನಂದಿಸಲಾಯಿತು.


ಸಹಕಾರ ಭಾರತಿ‌ ಬೆಳ್ತಂಗಡಿ ಅಧ್ಯಕ್ಷ ವೆಂಕಪ್ಪಯ್ಯ ಸ್ವಾಗತಿಸಿದರು. ನಿಕಟಪೂರ್ವಾಧ್ಯಕ್ಷ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya
error: Content is protected !!