25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ, ‘ನಾಯಕರಾಗಲು ಪ್ರಮುಖವಾಗಿ ಧೈರ್ಯ ಬಹಳ ಅಗತ್ಯ. ವಿದ್ಯಾರ್ಥಿಗಳು ತಾವು ಕಲಿತ ವಿದ್ಯಾ ಸಂಸ್ಥೆಯನ್ನು ಎಂದಿಗೂ ಮರೆಯಬಾರದು’ ಎಂಬುದಾಗಿ ಕಿವಿ ಮಾತನ್ನು ನುಡಿದರು. ವಿದ್ಯಾರ್ಥಿ ನಾಯಕರುಗಳಿಗೆ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ ಸೋಜ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ , ಸ್ವಾಗತಿಸಿದರು. ವೇದಿಕೆಯಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದು, ಅಧ್ಯಕ್ಷ ಧನುಷ್ ಇವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ಗೀತಾ ಇವರು ಪುಷ್ಪ ಗುಚ್ಛ ಸಮರ್ಪಿಸಿದರು. ಉಪನ್ಯಾಸಕಿ ವಸಂತಿ ಇವರು ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ಇವರು ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!