April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಪೆರ್ಮಾಣು: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ 2023-24 ನೇ ಸಾಲಿನ ಪ್ರಥಮ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ಜೂ.24 ರಂದು ಜರುಗಿತು.

ಸಭೆಯು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೆ.ಎಮ್.ಎಫ್ ವೈದ್ಯಾಧಿಕಾರಿ ಡಾ| ಗಣಪತಿ ಮಾಹಿತಿ ನೀಡಿದರು.

ಈ ವೇಳೆ ಸಂಘವು ರೂ. 2,64,000 ಲಾಭ ಹೊಂದಿದ್ದು, ಸಂಘದ ಸದಸ್ಯರ ಮಕ್ಕಳು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಧನಸಹಾಯ ನೀಡಲಾಯಿತು. ಸಂಘದ ಇಬ್ಬರು ಸದಸ್ಯರಿಗೆ ಆರೋಗ್ಯ ಸಹಾಯ ಧನ ಹಸ್ತಾಂತರಿಸಲಾಯಿತು.

ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕುವ ಸದಸ್ಯರಾದ ಪ್ರಥಮ ಆಶ್ರಯ ಅಜ್ರಿ ಮೂಡಬೆಟ್ಟು, ದ್ವಿತೀಯ ಪ್ರವೀಣ್ ವಿ.ಜಿ. , ತೃತೀಯ ಸುಂದರ ಗೌಡ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಯಮುನಾ, ಸಂಘದ ನಿರ್ದೇಶಕರು , ಸದಸ್ಯರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಶ್ರೀಮತಿ ಶಾಂತಿ ವರದಿ ವಾಚಿಸಿದರು. ಉಪಾಧ್ಯಕ್ಷೆ ಸುಮಿತ್ರಾ ಶೆಟ್ಟಿ ಸ್ವಾಗತಿಸಿ, ನಿರ್ದೇಶಕಿ ಸುಲತಾ ಧನ್ಯವಾದವಿತ್ತರು.

Related posts

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!