23.6 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್‌ ಸೈಕಲ್‌ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ.

ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22 ರಂದು ಬೆಳಿಗ್ಗೆ, ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ, ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA70J4070 ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ, ರಾಜೇಶ್ ರವರ ಬಾಬ್ತು ಮೋಟಾರ್‌ ಸೈಕಲ್‌, ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಮೋಟಾರ್‌ ಸೈಕಲ್‌ ನ್ನು ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 49/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya
error: Content is protected !!