July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್‌ ಸೈಕಲ್‌ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ.

ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22 ರಂದು ಬೆಳಿಗ್ಗೆ, ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ, ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA70J4070 ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ, ರಾಜೇಶ್ ರವರ ಬಾಬ್ತು ಮೋಟಾರ್‌ ಸೈಕಲ್‌, ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಮೋಟಾರ್‌ ಸೈಕಲ್‌ ನ್ನು ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 49/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya
error: Content is protected !!