23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರತಿಜ್ಞಾವಿಧಿ ಸ್ವೀಕಾರ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ವಿನಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೊಳ್ಮನಾರ್ ಚರ್ಚಿನ ಧರ್ಮ ಗುರುಗಳಾದ ಸೆಬಾಸ್ಟಿಯನ್ ಪುನ್ನತಾನತ್ತ ರವರು ಮಾತನಾಡಿ ಶಾಲೆಯಲ್ಲಿ ಒಂದು ಸರ್ಕಾರ ರಚನೆ ಮಾಡಿ ಮಕ್ಕಳಿಗೆ ಜವಾಬ್ದಾರಿ ಹಂಚುವುದು ಬಹಳಷ್ಟು ಸಂತೋಷವಾಗಿದೆ, ಈ ಸಂದರ್ಭದಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ವಿದ್ಯಾರ್ಥಿಗಳಲ್ಲಿ ಹಂಚಿಕೊಂಡರು,ಶಾಲೆಯಿಂದ ಎಲ್ಲಾ ಶಿಕ್ಷಣ ದೊರೆಯಬೇಕು ಶಾಲಾ ಚುನಾವಣೆಯು ವಿದ್ಯಾರ್ಥಿಗಳ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯ ಶಿಕ್ಷಕ ಶೀನಪ್ಪಗೌಡ ಈ ವರ್ಷ ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆ ಮೂಡಿಸಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಲವು ಜವಾಬ್ದಾರಿಗಳನ್ನು ಹಂಚಲಾಗಿದೆ ಇದರಿಂದ ಮಕ್ಕಳಿಗೆ ಶಾಲಾ ದಿನಗಳಲ್ಲಿ ಉತ್ತಮ ಜವಾಬ್ದಾರಿ ಬರುತ್ತದೆ ಎಂದು ತಿಳಿಸಿದರು.


ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಶಾಲಾ ಮಂತ್ರಿಮಂಡಲ ಜವಾಬ್ದಾರಿಗಳನ್ನು ತಿಳಿಸಿದರು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿ ಸ್ವಾಗತಿಸಿ, ಶಾಲಾ ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!