ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾಗೂ‌ ಶ್ರೀ ಧರ್ಮಸ್ಥಳ ಭಜನಾ ಪರಿಷತ್ತಿನ ಸಹಯೋಗದೊಂದಿಗೆ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಕುಣಿತ ಭಜನಾ ತಂಡದ ಉದ್ಘ್ಹಾಟನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್‌ ಮದ್ದಡ್ಕ ‌ದೀಪ ಪ್ರಜ್ವಲನೆ ಮಾಡಿದರು.

ಗರ್ಡಾಡಿ ವಲಯದ ಮೇಲ್ವಿಚಾರಕಿ ಹೇಮಾವತಿ ಸ್ವಾಗತಿಸಿ ಧನ್ಯವಾದವಿತ್ತರು. ಈ‌ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಕುಲಾಲ್, ವಲಯದ ಒಕ್ಕೂಟ ಅಧ್ಯಕ್ಷ ವರದ ರಾಜ್, ಧನಂಜಯ, ಕರುಣಾಕರ ಸಾಲ್ಯಾನ್ ಭಜನಾ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Leave a Comment

error: Content is protected !!