23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೆಎಂಎಫ್ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗನ್ನಾಥ ಶೆಟ್ಟಿ ಮೈರ ಅವರನ್ನು ಅಭಿನಂದಿಸಲಾಯಿತು.


ಸಹಕಾರ ಭಾರತಿ‌ ಬೆಳ್ತಂಗಡಿ ಅಧ್ಯಕ್ಷ ವೆಂಕಪ್ಪಯ್ಯ ಸ್ವಾಗತಿಸಿದರು. ನಿಕಟಪೂರ್ವಾಧ್ಯಕ್ಷ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya
error: Content is protected !!