ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೆಎಂಎಫ್ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗನ್ನಾಥ ಶೆಟ್ಟಿ ಮೈರ ಅವರನ್ನು ಅಭಿನಂದಿಸಲಾಯಿತು.


ಸಹಕಾರ ಭಾರತಿ‌ ಬೆಳ್ತಂಗಡಿ ಅಧ್ಯಕ್ಷ ವೆಂಕಪ್ಪಯ್ಯ ಸ್ವಾಗತಿಸಿದರು. ನಿಕಟಪೂರ್ವಾಧ್ಯಕ್ಷ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya
error: Content is protected !!