23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ, ‘ನಾಯಕರಾಗಲು ಪ್ರಮುಖವಾಗಿ ಧೈರ್ಯ ಬಹಳ ಅಗತ್ಯ. ವಿದ್ಯಾರ್ಥಿಗಳು ತಾವು ಕಲಿತ ವಿದ್ಯಾ ಸಂಸ್ಥೆಯನ್ನು ಎಂದಿಗೂ ಮರೆಯಬಾರದು’ ಎಂಬುದಾಗಿ ಕಿವಿ ಮಾತನ್ನು ನುಡಿದರು. ವಿದ್ಯಾರ್ಥಿ ನಾಯಕರುಗಳಿಗೆ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ ಸೋಜ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ , ಸ್ವಾಗತಿಸಿದರು. ವೇದಿಕೆಯಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದು, ಅಧ್ಯಕ್ಷ ಧನುಷ್ ಇವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ಗೀತಾ ಇವರು ಪುಷ್ಪ ಗುಚ್ಛ ಸಮರ್ಪಿಸಿದರು. ಉಪನ್ಯಾಸಕಿ ವಸಂತಿ ಇವರು ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ಇವರು ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya
error: Content is protected !!