ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ, ‘ನಾಯಕರಾಗಲು ಪ್ರಮುಖವಾಗಿ ಧೈರ್ಯ ಬಹಳ ಅಗತ್ಯ. ವಿದ್ಯಾರ್ಥಿಗಳು ತಾವು ಕಲಿತ ವಿದ್ಯಾ ಸಂಸ್ಥೆಯನ್ನು ಎಂದಿಗೂ ಮರೆಯಬಾರದು’ ಎಂಬುದಾಗಿ ಕಿವಿ ಮಾತನ್ನು ನುಡಿದರು. ವಿದ್ಯಾರ್ಥಿ ನಾಯಕರುಗಳಿಗೆ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ ಸೋಜ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ , ಸ್ವಾಗತಿಸಿದರು. ವೇದಿಕೆಯಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದು, ಅಧ್ಯಕ್ಷ ಧನುಷ್ ಇವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ಗೀತಾ ಇವರು ಪುಷ್ಪ ಗುಚ್ಛ ಸಮರ್ಪಿಸಿದರು. ಉಪನ್ಯಾಸಕಿ ವಸಂತಿ ಇವರು ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ಇವರು ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Leave a Comment

error: Content is protected !!