23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ, ‘ನಾಯಕರಾಗಲು ಪ್ರಮುಖವಾಗಿ ಧೈರ್ಯ ಬಹಳ ಅಗತ್ಯ. ವಿದ್ಯಾರ್ಥಿಗಳು ತಾವು ಕಲಿತ ವಿದ್ಯಾ ಸಂಸ್ಥೆಯನ್ನು ಎಂದಿಗೂ ಮರೆಯಬಾರದು’ ಎಂಬುದಾಗಿ ಕಿವಿ ಮಾತನ್ನು ನುಡಿದರು. ವಿದ್ಯಾರ್ಥಿ ನಾಯಕರುಗಳಿಗೆ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ ಸೋಜ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ , ಸ್ವಾಗತಿಸಿದರು. ವೇದಿಕೆಯಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದು, ಅಧ್ಯಕ್ಷ ಧನುಷ್ ಇವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ಗೀತಾ ಇವರು ಪುಷ್ಪ ಗುಚ್ಛ ಸಮರ್ಪಿಸಿದರು. ಉಪನ್ಯಾಸಕಿ ವಸಂತಿ ಇವರು ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ಇವರು ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!