25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು: ಕಳೆದ ಕೆಲ ಸಮಯದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತೆಂಕಕಾರಂದೂರು ಗ್ರಾಮದ ಹಿಬರೋಡಿ ಮನೆಯ ಹರೀಶ್ ಅವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೂ. 25 ಸಾವಿರ ಮೊತ್ತವನ್ನು ಸಿಎ ಬ್ಯಾಂಕ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ ಹಸ್ತಾಂತರಿಸಿದರು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೆಲ ಸಮಯ ಆಸ್ಪತ್ರೆಯಲ್ಲಿದ್ದರು. ಸುಮಾರು 8 ಶಸ್ತ್ರಚಿಕಿತ್ಸೆ ಕೂಡ ಆಗಿದ್ದು ಅರ್ಥಿಕವಾಗಿ‌ ಸಮಸ್ಯೆಯನ್ನು ಹರೀಶ್ ಕುಟುಂಬ ಎದುರಿಸುತ್ತಿದೆ.

ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ದೇವಿಪ್ರಸಾದ್ ಶೆಟ್ಟಿ, ಹೇಮಂತ್ ಕಟ್ಟೆ, ದಿನೇಶ್ ಪಿ‌.ಕೆ, ಕೊರಗಪ್ಪ, ಮಮತಾ ಪೂಜಾರಿ ಹಾಗೂ ಶರತ್ ಕಾಡಬಾಗಿಲು ಉಪಸ್ಥಿತರಿದ್ದರು.

Related posts

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
error: Content is protected !!