July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ ಅವರು ಜೂ.25 ರಂದು 2024-25ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕಲಿಕೆಯು ಕಲ್ಪನೆಯೊಂದಿಗೆ ಸಾಗಬೇಕು ಹಾಗೂ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಇತರ ಪೂರಕ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ಕನ್ನಡ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಮಮ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ಚಿಂತನ್ ಮತ್ತು ಆನೆಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಶಶಾಂಕ್ ಪ್ರಭು ವಂದಿಸಿದರು.

Related posts

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!