24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ಬಳಂಜ: ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಗೆ ಬರುವ ಬಳಂಜ ಮತ್ತು ನಾಲ್ಕೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.
ಇದರಿಂದ ಇಕ್ಕಟ್ಟಿಗೆ ಸಿಲುಕಿದ ನಾಗರಿಕರು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಕಷ್ಟು ವರ್ಷಗಳಿಂದ ಬಳಂಜದಲ್ಲಿ ಏರ್ಟೆಲ್ ಮೊಬೈಲ್ ಟವರ್ ಇದ್ದರೂ ನೆಟ್‌ವರ್ಕ್ ಸಮಸ್ಯೆ ಬಾಧಿಸುತ್ತಿದೆ. ವಿದ್ಯುತ್ ಹೋಗುತ್ತಿದ್ದಂತೆ ನೆಟ್‌ವರ್ಕ್ ಸಮಸ್ಯೆ ಎದುರಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೆ ಯಾವುದೇ ಉಪಯೋಗವಿಲ್ಲ ಎಂದು ಸ್ಥಳಿಯ ನಿವಾಸಿ ಕರುಣಾಕರ ಹೆಗ್ಡೆ ಬೊಕ್ಕಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಜನರಿಗೆ ನೆಟ್ವರ್ಕ್ ಸಮಸ್ಯೆಯಿಂದ ಮುಕ್ತಿ ಯಾವಾಗ,,‌‌,?ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಇಲ್ಲದೆ ಯಾವುದೇ ರೀತಿಯ ವ್ಯಾಪಾರ ವಹಿವಾಟು ನಡೆಯುವುದಿಲ್ಲ.ಸಾಮಾನ್ಯವಾಗಿ ಎಲ್ಲಾ ಸವಲತ್ತುಗಳನ್ನು ಪಡೆಯಲು ರೇಷನ್,‌ಬ್ಯಾಂಕ್,ಸೈಬರ್,ಪಂಚಾಯತ್ ಹಾಗೂ ಮೊದಲಾದ ವ್ಯವಸ್ಥೆಗೆ ಮೊಬೈಲ್ ಫೋನ್ ಅಗತ್ಯ.ಹೀಗಿರುವಾಗ ನೆಟ್ವರ್ಕ್ ಇಲ್ಲವಾದರೆ ಯಾವ ಸವಲತ್ತು ಇದ್ದು ಏನು ಪ್ರಯೋಜನ.ಇದೇ ಸಮಸ್ಯೆಯಿಂದ ನಮ್ಮ ನಾಲ್ಕೂರು ಗ್ರಾಮದ ಜನರು ಬಹಳ ಇಕ್ಕಟ್ಟಿಗೆ ಸಿಲುಕಿದ್ದಾರೆ.ಒಂದು ಯಾವುದೇ ಸುದ್ದಿಯನ್ನು ಡೌನ್ ಲೋಡ್ ಮಾಡಲು ಮನೆಯಿಂದ ಹೊರಗೆ ಅಂದರೆ ಎತ್ತರದ ಪ್ರದೇಶದಲ್ಲಿ ಹೋಗಿ ಡೌನ್ಲೋಡ್ ಮಾಡಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.ಬಳಂಜ ದಲ್ಲಿ ಒಂದು ಏರ್ಟೆಲ್ ಟವರ್ ಇದ್ದು ಯಾವುದೇ ಪ್ರಯೋಜನವಾಗಿಲ್ಲ. ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಟವರ್ .ಇದಕ್ಕೆ ಸಂಬಂಧ ಪಟ್ಟ ಇಲಾಖೆ ‌ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಕರುಣಾಕರ ಹೆಗ್ಡೆ ಆಗ್ರಹಿಸಿದ್ದಾರೆ.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!