March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!