September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!