25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!