September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya
error: Content is protected !!