September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಏರ್ಪಡಿಸಲಾಗಿತ್ತು.

ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಕ್ಷತಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಬಹಳ ದೊಡ್ಡದು ಎಂದು ತಿಳಿಸುತ್ತಾ ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಪೋಷಕರು ಯಾವ ರೀತಿ ಮನೆಯಲ್ಲಿ ವಾತಾವರಣವನ್ನು ನಿರ್ಮಿಸಬೇಕು. ಎಂಬುದನ್ನು ಉದಾರಣೆಗಳ ಮೂಲಕ ಬಹಳ ಚೆನ್ನಾಗಿ ಪೋಷಕರಿಗೆ ಮನಮುಟ್ಟುವಂತೆ ಮಾಹಿತಿಯನ್ನು ನೀಡಿದರು.

ಪ್ರೌಢ ಹಂತದಲ್ಲಿ ಮಕ್ಕಳಲ್ಲಿ ದೈಹಿಕವಾಗಿ ಮಾನಸಿಕವಾಗಿ ಬದಲಾವಣೆಯಾಗುತ್ತದೆ ಇದನ್ನು ಪೋಷಕರು ಅರ್ಥೈಸಿಕೊಂಡು ಮಕ್ಕಳೊಂದಿಗೆ ಪೋಷಕರಾಗಿ ಮಾತ್ರವಲ್ಲ ಸ್ನೇಹಿತರಾಗಿ ಇರಬೇಕೆಂದು ಕಿವಿಮಾತು ಹೇಳಿದರು. ಸುಮಾರು 60 ಜನ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಶೋಲಿಯವರು ನಿರ್ವಹಿಸಿದರು.

Related posts

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!