23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಏರ್ಪಡಿಸಲಾಗಿತ್ತು.

ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಕ್ಷತಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಬಹಳ ದೊಡ್ಡದು ಎಂದು ತಿಳಿಸುತ್ತಾ ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಪೋಷಕರು ಯಾವ ರೀತಿ ಮನೆಯಲ್ಲಿ ವಾತಾವರಣವನ್ನು ನಿರ್ಮಿಸಬೇಕು. ಎಂಬುದನ್ನು ಉದಾರಣೆಗಳ ಮೂಲಕ ಬಹಳ ಚೆನ್ನಾಗಿ ಪೋಷಕರಿಗೆ ಮನಮುಟ್ಟುವಂತೆ ಮಾಹಿತಿಯನ್ನು ನೀಡಿದರು.

ಪ್ರೌಢ ಹಂತದಲ್ಲಿ ಮಕ್ಕಳಲ್ಲಿ ದೈಹಿಕವಾಗಿ ಮಾನಸಿಕವಾಗಿ ಬದಲಾವಣೆಯಾಗುತ್ತದೆ ಇದನ್ನು ಪೋಷಕರು ಅರ್ಥೈಸಿಕೊಂಡು ಮಕ್ಕಳೊಂದಿಗೆ ಪೋಷಕರಾಗಿ ಮಾತ್ರವಲ್ಲ ಸ್ನೇಹಿತರಾಗಿ ಇರಬೇಕೆಂದು ಕಿವಿಮಾತು ಹೇಳಿದರು. ಸುಮಾರು 60 ಜನ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಶೋಲಿಯವರು ನಿರ್ವಹಿಸಿದರು.

Related posts

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!