July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು.

ಚುನಾವಣಾ ಪ್ರಕ್ರಿಯೆಯನ್ನು ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ ನಾಯಕ ಹಾಗೂ ಉಪನಾಯಕ ಹುದ್ದೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು ಅವಕಾಶ, ಅಂತಿಮ ಕಣದಲ್ಲಿರುವವರ ಸ್ಪರ್ದಾಳುಗಳ ಪಟ್ಟಿ, ಈ ರೀತಿ ಎಲ್ಲಾ ಹಂತಗಳನ್ನು ಕ್ರಮವತ್ತಾಗಿ ನಡೆಸಲಾಯಿತು. ಬಳಿಕ ವಿಜೇತ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಪ್ರಮಾಣವಚನವನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.


ಆ ಬಳಿಕ ವಿದ್ಯಾರ್ಥಿ ಸರಕಾರ ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರವಾಗಿ ವಿಚಾರಗಳನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ಬಳಗ ಸರ್ವ ರೀತಿಯ ಸಹಕಾರವನ್ನು ನೀಡಿದರು.
ಶಾಲಾ ಮುಖ್ಯಮಂತ್ರಿಯಾಗಿ ಸಂಜನಾ 10ಇ, ಉಪಮುಖ್ಯಮಂತ್ರಿಯಾಗಿ ಡೀತಮ್ 9 ಎ, ಕ್ರೀಡಾ ಮಂತ್ರಿಯಾಗಿ ನಿಖಿಲ್ ದೇವಾಡಿಗ10 ಸಿ, ಉಪ ಕ್ರೀಡಾಮಂತ್ರಿಯಾಗಿ ಶಶಾಂಕ್ 9 ಎ, ಸ್ವಚ್ಛತಾ ಮಂತ್ರಿಯಾಗಿ ಧನುಷ್ 10 ಸಿ , ಉಪ ಸ್ವಚ್ಛತಾ ಮಂತ್ರಿಯಾಗಿ ರೇಖಾ 9ಎ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮಂತ್ರಿಯಾಗಿ ಸುಧೀಶಾ 10 ಡಿ, ಉಪಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಂತ್ರಿಯಾಗಿ ಪ್ರೀತಮ್ ಕೆ ವಿ 9 ಬಿ, ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ ನಿಖಿಲ್ 10 ಬಿ, ಉಪ ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ 9 ಎ, ವಾರ್ತಾ ಮಂತ್ರಿಯಾಗಿ ಪೂಜಾ 10 ಈ,
ಉಪ ವಾರ್ತಾ ಮಂತ್ರಿಯಾಗಿ ಸಂಸ್ಕೃತಿ ನಾಯಕ್ 9 ಇ ಇವರು ಆಯ್ಕೆಯಾಗಿರುತ್ತಾರೆಂದು ಸಂಸ್ಥೆಯ ಮುಖ್ಯಸ್ಥ ಉದಯ್ ಕುಮಾರ್ ಬಿ ತಿಳಿಸಿದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya
error: Content is protected !!