September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟ‌ರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ ಬೀಸಲಾರಂಭಿಸಿದ್ದು ಈ ಮಧ್ಯೆ ಕೆಎಂಎಫ್ ಅಧ್ಯಕ್ಷರು ಬೆಲೆ ಏರಿಕೆಗೆ ಕಾರಣ, ಸ್ಪಷ್ಟನೆ ನೀಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಪ್ರಸ್ತುತ ಲೀಟರ್ ಹಾಲಿಗೆ 42 ರೂ. ಇದ್ದು, ಇದಕ್ಕೆ 2 ರೂ. ಹೆಚ್ಚಳ ಮಾಡಲಾಗುವುದು. ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ಆದರೆ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟ‌ರ್ (500 ಎಂಎಲ್) ಮತ್ತು ಒಂದು ಲೀಟರ್ (1000 ಎಂಎಲ್) ಪ್ಯಾಕೆಟ್‌ಗಳಿಗೆ ಮಾತ್ರ 50 ಮಿಲಿ ಲೀಟ‌ರ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೆಟ್‌ಗಳ ದರವನ್ನು 2 ರೂಪಾಯಿಯಂತೆ ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ನಂದಿನಿ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರ ಉತ್ಪನ್ನಗಳಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya
error: Content is protected !!