22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya
error: Content is protected !!