ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ತೆಂಕಕಾರಂದೂರು: ಕಳೆದ ಕೆಲ ಸಮಯದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತೆಂಕಕಾರಂದೂರು ಗ್ರಾಮದ ಹಿಬರೋಡಿ ಮನೆಯ ಹರೀಶ್ ಅವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೂ. 25 ಸಾವಿರ ಮೊತ್ತವನ್ನು ಸಿಎ ಬ್ಯಾಂಕ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ ಹಸ್ತಾಂತರಿಸಿದರು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೆಲ ಸಮಯ ಆಸ್ಪತ್ರೆಯಲ್ಲಿದ್ದರು. ಸುಮಾರು 8 ಶಸ್ತ್ರಚಿಕಿತ್ಸೆ ಕೂಡ ಆಗಿದ್ದು ಅರ್ಥಿಕವಾಗಿ‌ ಸಮಸ್ಯೆಯನ್ನು ಹರೀಶ್ ಕುಟುಂಬ ಎದುರಿಸುತ್ತಿದೆ.

ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ದೇವಿಪ್ರಸಾದ್ ಶೆಟ್ಟಿ, ಹೇಮಂತ್ ಕಟ್ಟೆ, ದಿನೇಶ್ ಪಿ‌.ಕೆ, ಕೊರಗಪ್ಪ, ಮಮತಾ ಪೂಜಾರಿ ಹಾಗೂ ಶರತ್ ಕಾಡಬಾಗಿಲು ಉಪಸ್ಥಿತರಿದ್ದರು.

Leave a Comment

error: Content is protected !!